ಸಿನಿಮಾ ಪ್ರೇಕ್ಷಕರ ಕೆಲವು ತಪ್ಪು ಕಲ್ಪನೆಗಳಿಂದ ಹೊಸ ಅಲೆಯ ಚಿತ್ರಗಳು ಇತ್ತೀಚಿನ ದಿನಗಳಲ್ಲಿ ಜನರನ್ನು ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಖ್ಯಾತ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ವಿಷಾದಿಸಿದರು. ನಗರದ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಮೈಸೂರು ಸೊಸೈಟಿಯು ಆಯೋಜಿಸಿರುವ ‘ಪರಿದೃಶ್ಯ – ಎರಡು ದಿನಗಳ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ಉತ್ಸವದಲ್ಲಿ ಭಾನುವಾರ ನಡೆದ ಕನ್ನಡದ ಹೊಸ ಅಲೆಯ ಚಿತ್ರಗಳು ಕುರಿತು ಸಂವಾದದಲ್ಲಿ ಮಾತನಾಡಿದ ಅವರು, ಸಮಾಜವಾದಿ ಚಿ೦ತನೆಯ ಮುಖಾಂತರ ಹೊಸ ಅಲೆಯ ಚಿತ್ರಗಳು ಹುಟ್ಟಿಕೊಂಡವು. ಆದರೆ, ಹೊಸ ಅಲೆಯ ಚಿತ್ರಗಳನ್ನು ಅದರ ಮೇಲ್ನೋಟಕ್ಕಷ್ಟೇ ಸೀಮಿತವಾಗಿಸಿ ವಿಶ್ಲೇಷಿ ಸುವ ಮುಖಾಂತರ ತಪ್ಪು ವ್ಯಾಖ್ಯಾನ ಮಾಡಲಾಗಿದೆ ಎಂದರು. ಸಂಸ್ಕಾರ ಹೊಸ ಅಲೆಯ ಮೊದಲ ಕನ್ನಡ ಚಿತ್ರ, ಸಂಸ್ಕಾರ ಚಿತ್ರದ ಮುಂಚಿನ ಸಿನಿಮಾಗಳಲ್ಲಿ ಭಾವುಕ ನೆಲೆಯಲ್ಲಿ ಅಥವಾ ಭಾವನಾತ್ಮಕವಾಗಿ ಉದ್ರೇಕಿಸುವ ಕಥೆಯನ್ನು ಮಾತ್ರ ಕಟ್ಟಲಾಗುತ್ತಿತ್ತು. ಭಾವನಾತ್ಮಕವಾಗಿ ಉದ್ರೇಕಿಸದೇ ವೈಚಾರಿಕವಾಗಿ ಉದ್ರೇಕಿಸುವ ಕಥೆಯನ್ನು ಕಟ್ಟುವ ಟ್ರೆಂಡ್ ಹುಟ್ಟುಹಾಕಿದ್ದು
ಸಂಸ್ಕಾರ. ಆದ್ದರಿಂದ ””ಸಂಸ್ಕಾರ”” ಚಿತ್ರವನ್ನು ಕನ್ನಡದ ಮೊದಲ ಹೊಸ ಅಲೆಯ ಸಿನಿಮಾ ಎಂದು ಗುರುತಿಸಲಾಗುತ್ತದೆ ಎಂದು
ಅವರು ತಿಳಿಸಿದರು.
ಹೊಸ ಅಲೆಯ ಚಿತ್ರಗಳು ಮೊದಲು ಆದರೆ ಪ್ರಾರಂಭವಾಗಿದ್ದು ಕನ್ನಡದಲ್ಲಿ. ಹೊಸ ಅಲೆಯ ಸಿನಿಮಾಗಳ ಸ್ವರ್ಣ ಮಹೋ ತ್ಸವ ಆಚರಿಸಿದ್ದು ಕೇರಳದಲ್ಲಿ, ಕನ್ನಡ ಚಿತ್ರ ರಂಗದ ನಿರಾಸಕ್ತಿಯೇ ಇದಕ್ಕೆ ಕಾರಣ.

ಕನ್ನಡ ಚಿತ್ರರಂಗ ಪ್ಯಾನ್ ಇಂಡಿಯಾ ವ್ಯಾಮೋಹಕ್ಕೆ ಬಲಿಯಾದರೆ, ಹಿಂದಿ ಸಿನಿಮಾಗಳು ಯಾವ ಸಮಸ್ಯೆ ಎದುರಿಸಿತ್ತೋ ಅದೆಲ್ಲವನ್ನೂ ಎದುರಿಸಬೇಕಾಗುತ್ತದೆ.
ಸ್ಥಳೀಯತೆಯ ಆಧಾರದಲ್ಲಿ ಕಟ್ಟಿಕೊಡಬಹುದಾದ ಯಾವುದೇ ಕಥೆಗಳನ್ನು ಕಳೆದುಕೊಳ್ಳಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ – ಗಿರೀಶ್ ಕಾಸರವಳ್ಳಿ, ಖ್ಯಾತ
ನಿರ್ದೇಶಕ